Song - Naada deviye kande ninna madilalli entha drushya
Lyrics - K S Nissar Ahmed
Singer - S Ashwath & Kasturi Shankar
http://www.kannadaaudio.com/ Songs/Patriotic/ Karunada-Thaayi-Sada-Chinmayi/ Nada-Deviye.ram
ನಾಡ ದೇವಿಯೇ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯ;
ನೋವು ನಗೆಯ ಸಮ್ಮಿಶ್ರದಲ್ಲಿ ಎದೆಯಾಯಿತದಕೆ ವಶ್ಯ.
ಒಂದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇದ ತಾಯಿ!
ಒಂದೇ ನೆಲದ ರಸ ಹೀರಲೇನು? ಸಿಹಿ, ಕಹಿಯ ರುಚಿಯ ಕಾಯಿ,
ನಾಡ ದೇವಿಯೇ ...
...
ಕತ್ತಲಲ್ಲಿ ಕಂಗೆಟ್ಟು ಎಡವಿ ತಡವರಿಸುತಿರುವ ಮಂದಿ -
ಕಡೆಗಣಿಸುತವರ ನಡೆದಿರುವನೊಬ್ಬ ಸ್ವಹಿತಕ್ಕೆ ಹಿಡಿದು ದೊಂದಿ.
ಸಂಸ್ಕಾರವಿಲ್ಲ ಹೆಣಕೆಂದು ತಲೆಗೆ ಕೈ ಹೊತ್ತ ಬಡವನೊಬ್ಬ;
ಇನ್ನೊಬ್ಬ ತಾನು ಆಚರಿಸುತಿರುವ ವೈಭವದ ಹುಟ್ಟುಹಬ್ಬ.
ನಾಡ ದೇವಿಯೇ ...
ಅನ್ನವಿರದ ಹಸುಳೆಗಳ ತಬ್ಬಿ ಅಳುತಿರುವ ತಾಯ ಕಂಡೆ;
ದುಃಖಪೂರ ಉಕ್ಕುಕ್ಕಿ ಮೊರೆಯೆ, ಕೊಚ್ಚಿತ್ತು ಬಾಳ ದಂಡೆ.
ಹೊಟ್ಟೆ ಹೇಳಿಗೆಯ ಬಿಚ್ಚಿ, ಹಸಿವ ಹಾವನ್ನು ಚುಚ್ಚಿ ಕೆಣಕಿ -
ಯುಕ್ತಿ ರಾಗದಲಿ ಕುಣಿಸಿ, ದಣಿಸಿ, ನಲಿದಿಹರು ಹಲರು ಬದುಕಿ.
ನಾಡ ದೇವಿಯೇ ...
ನರನನ್ನೆ ಗಾಳವಾಗಿಸುತ ಬಾಳ ನೀರಲ್ಲಿ, ನಲಿವ ನರಿಗೆ -
ನಾವೊಂದು ಎನುವ ಸತ್ಯಕ್ಕೆ ಅಡ್ಡಗಾಲೆಳೆವ ನಾಡಿನರಿಗೆ,
ಎಚ್ಚರವ ನೀಡಿ ತಿದ್ದುತ್ತಲಿರಲಿ ಕವಿ ಭಾವವೆಂಬ ಬಡಿಗೆ,
ತಾಯಿ ಭಾರತಿಯೆ, ಇದುವೇ ನಿನಗೆ ನಾ ಸಲಿಸಲಿರುವ ಕೊಡುಗೆ.
ನಾಡ ದೇವಿಯೇ ...
ಗುರಿ ಮುಟ್ಟುತಿರಲಿ ಈ ಜೀವ ತಾನು, ಹಿಡಿದೊಂದು ದಿಟದ ದಾರಿ -
ಮರೆಯದಂತೆ ಹೊರಿಸಿರುವ ಋಣವ, ಕೃತಿಯಲ್ಲಿ ಅದನು ಸಾರಿ.
ನಿನ್ನೊಲವ ತೈಲ ನನ್ನೆದೆಯೊಳಿರಲಿ; ಬೆಳಗಿರಲಿ ಬಾಳ ಬತ್ತಿ.
ಕೊನೆ ಕಾಣಲಮ್ಮ ಅನುಭವದಿ ಮಾಗಿ, ನಿನ್ನಡಿಗೆ ಬಾಗಿ ನೆತ್ತಿ.
Lyrics - K S Nissar Ahmed
Singer - S Ashwath & Kasturi Shankar
http://www.kannadaaudio.com/
ನಾಡ ದೇವಿಯೇ ಕಂಡೆ ನಿನ್ನ ಮಡಿಲಲ್ಲಿ ಎಂಥ ದೃಶ್ಯ;
ನೋವು ನಗೆಯ ಸಮ್ಮಿಶ್ರದಲ್ಲಿ ಎದೆಯಾಯಿತದಕೆ ವಶ್ಯ.
ಒಂದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇದ ತಾಯಿ!
ಒಂದೇ ನೆಲದ ರಸ ಹೀರಲೇನು? ಸಿಹಿ, ಕಹಿಯ ರುಚಿಯ ಕಾಯಿ,
ನಾಡ ದೇವಿಯೇ ...
...
ಕತ್ತಲಲ್ಲಿ ಕಂಗೆಟ್ಟು ಎಡವಿ ತಡವರಿಸುತಿರುವ ಮಂದಿ -
ಕಡೆಗಣಿಸುತವರ ನಡೆದಿರುವನೊಬ್ಬ ಸ್ವಹಿತಕ್ಕೆ ಹಿಡಿದು ದೊಂದಿ.
ಸಂಸ್ಕಾರವಿಲ್ಲ ಹೆಣಕೆಂದು ತಲೆಗೆ ಕೈ ಹೊತ್ತ ಬಡವನೊಬ್ಬ;
ಇನ್ನೊಬ್ಬ ತಾನು ಆಚರಿಸುತಿರುವ ವೈಭವದ ಹುಟ್ಟುಹಬ್ಬ.
ನಾಡ ದೇವಿಯೇ ...
ಅನ್ನವಿರದ ಹಸುಳೆಗಳ ತಬ್ಬಿ ಅಳುತಿರುವ ತಾಯ ಕಂಡೆ;
ದುಃಖಪೂರ ಉಕ್ಕುಕ್ಕಿ ಮೊರೆಯೆ, ಕೊಚ್ಚಿತ್ತು ಬಾಳ ದಂಡೆ.
ಹೊಟ್ಟೆ ಹೇಳಿಗೆಯ ಬಿಚ್ಚಿ, ಹಸಿವ ಹಾವನ್ನು ಚುಚ್ಚಿ ಕೆಣಕಿ -
ಯುಕ್ತಿ ರಾಗದಲಿ ಕುಣಿಸಿ, ದಣಿಸಿ, ನಲಿದಿಹರು ಹಲರು ಬದುಕಿ.
ನಾಡ ದೇವಿಯೇ ...
ನರನನ್ನೆ ಗಾಳವಾಗಿಸುತ ಬಾಳ ನೀರಲ್ಲಿ, ನಲಿವ ನರಿಗೆ -
ನಾವೊಂದು ಎನುವ ಸತ್ಯಕ್ಕೆ ಅಡ್ಡಗಾಲೆಳೆವ ನಾಡಿನರಿಗೆ,
ಎಚ್ಚರವ ನೀಡಿ ತಿದ್ದುತ್ತಲಿರಲಿ ಕವಿ ಭಾವವೆಂಬ ಬಡಿಗೆ,
ತಾಯಿ ಭಾರತಿಯೆ, ಇದುವೇ ನಿನಗೆ ನಾ ಸಲಿಸಲಿರುವ ಕೊಡುಗೆ.
ನಾಡ ದೇವಿಯೇ ...
ಗುರಿ ಮುಟ್ಟುತಿರಲಿ ಈ ಜೀವ ತಾನು, ಹಿಡಿದೊಂದು ದಿಟದ ದಾರಿ -
ಮರೆಯದಂತೆ ಹೊರಿಸಿರುವ ಋಣವ, ಕೃತಿಯಲ್ಲಿ ಅದನು ಸಾರಿ.
ನಿನ್ನೊಲವ ತೈಲ ನನ್ನೆದೆಯೊಳಿರಲಿ; ಬೆಳಗಿರಲಿ ಬಾಳ ಬತ್ತಿ.
ಕೊನೆ ಕಾಣಲಮ್ಮ ಅನುಭವದಿ ಮಾಗಿ, ನಿನ್ನಡಿಗೆ ಬಾಗಿ ನೆತ್ತಿ.
ನೋವು ನಗೆಯ ಸಮ್ಮಿಶ್ರದಲ್ಲಿ ಎದೆಯಾಯಿತದಕೆ ವಶ್ಯ.
ಒಂದೆದೆಯ ಹಾಲ ಕುಡಿದವರ ನಡುವೆ ಎಷ್ಟೊಂದು ಭೇದ ತಾಯಿ!
ಒಂದೇ ನೆಲದ ರಸ ಹೀರಲೇನು? ಸಿಹಿ, ಕಹಿಯ ರುಚಿಯ ಕಾಯಿ,
ನಾಡ ದೇವಿಯೇ ...
...
ಕತ್ತಲಲ್ಲಿ ಕಂಗೆಟ್ಟು ಎಡವಿ ತಡವರಿಸುತಿರುವ ಮಂದಿ -
ಕಡೆಗಣಿಸುತವರ ನಡೆದಿರುವನೊಬ್ಬ ಸ್ವಹಿತಕ್ಕೆ ಹಿಡಿದು ದೊಂದಿ.
ಸಂಸ್ಕಾರವಿಲ್ಲ ಹೆಣಕೆಂದು ತಲೆಗೆ ಕೈ ಹೊತ್ತ ಬಡವನೊಬ್ಬ;
ಇನ್ನೊಬ್ಬ ತಾನು ಆಚರಿಸುತಿರುವ ವೈಭವದ ಹುಟ್ಟುಹಬ್ಬ.
ನಾಡ ದೇವಿಯೇ ...
ಅನ್ನವಿರದ ಹಸುಳೆಗಳ ತಬ್ಬಿ ಅಳುತಿರುವ ತಾಯ ಕಂಡೆ;
ದುಃಖಪೂರ ಉಕ್ಕುಕ್ಕಿ ಮೊರೆಯೆ, ಕೊಚ್ಚಿತ್ತು ಬಾಳ ದಂಡೆ.
ಹೊಟ್ಟೆ ಹೇಳಿಗೆಯ ಬಿಚ್ಚಿ, ಹಸಿವ ಹಾವನ್ನು ಚುಚ್ಚಿ ಕೆಣಕಿ -
ಯುಕ್ತಿ ರಾಗದಲಿ ಕುಣಿಸಿ, ದಣಿಸಿ, ನಲಿದಿಹರು ಹಲರು ಬದುಕಿ.
ನಾಡ ದೇವಿಯೇ ...
ನರನನ್ನೆ ಗಾಳವಾಗಿಸುತ ಬಾಳ ನೀರಲ್ಲಿ, ನಲಿವ ನರಿಗೆ -
ನಾವೊಂದು ಎನುವ ಸತ್ಯಕ್ಕೆ ಅಡ್ಡಗಾಲೆಳೆವ ನಾಡಿನರಿಗೆ,
ಎಚ್ಚರವ ನೀಡಿ ತಿದ್ದುತ್ತಲಿರಲಿ ಕವಿ ಭಾವವೆಂಬ ಬಡಿಗೆ,
ತಾಯಿ ಭಾರತಿಯೆ, ಇದುವೇ ನಿನಗೆ ನಾ ಸಲಿಸಲಿರುವ ಕೊಡುಗೆ.
ನಾಡ ದೇವಿಯೇ ...
ಗುರಿ ಮುಟ್ಟುತಿರಲಿ ಈ ಜೀವ ತಾನು, ಹಿಡಿದೊಂದು ದಿಟದ ದಾರಿ -
ಮರೆಯದಂತೆ ಹೊರಿಸಿರುವ ಋಣವ, ಕೃತಿಯಲ್ಲಿ ಅದನು ಸಾರಿ.
ನಿನ್ನೊಲವ ತೈಲ ನನ್ನೆದೆಯೊಳಿರಲಿ; ಬೆಳಗಿರಲಿ ಬಾಳ ಬತ್ತಿ.
ಕೊನೆ ಕಾಣಲಮ್ಮ ಅನುಭವದಿ ಮಾಗಿ, ನಿನ್ನಡಿಗೆ ಬಾಗಿ ನೆತ್ತಿ.